ದುರಾದೃಷ್ಟ

ಗುಡಿಸಲು ತುಂಬಾ
ಮಸಿ ಹಿಡಿದು ಮುಕ್ಕಾದ
ಇಂಡಾಲಿಯಂ
ಪಾತ್ರೆಗಳ ಸದ್ದು-ಗದ್ದಲ


ಹಗಲಿಡೀ ನಿದ್ದೆಯಿಲ್ಲ
ಕುಡಿದ ನಶೆ : ಆರಕ್ಕೇರದು ಮೂರಕ್ಕಿಳಿಯದು
ಪಾಪ!
ಹರಕು ಚಾಪೆ ಕಾಲಿಗೂ ಸಾಲದು


ತವರ ಪಾಲಾದ ಹಿರಿಮಗಳ,
ಮೇಜುವಾನಿ ಮಾಡುವ ತಾಯಿಯ
ಜೋಡಿ
ಎಕ್ಕಡಕ್ಕೆ ಚುಚ್ಚಿಕೊಂಡ ಮೊಂಡು ಮೊಳೆ!


ಮೂಲೆಸೇರಿ ಹೇನು-ಸೀರು ಕುಕ್ಕುವ ನೆಪದಿ
ಕಂದಮ್ಮಗಳ ಮೇಲೆ ತನ್ನೆಲ್ಲ
ಕೋಪ-ತಾಪ
ತೀರಿಸಿಕೊಳ್ಳುವ ಗಂಡ ಸತ್ತ-ಹಿರಿಸೊಸೆ


ಮಾತೆತ್ತಿದರೆ ಸಾಕು
ಸೋರುವ ಮೂಗನೂ ಸೀಟದೆ
ಆಕಾಶ-ಭೂಮಿ
ಒಂದು ಮಾಡುವ ಮೊಮ್ಮಕ್ಕಳ ಹಿಂಡು!


ಗುಡ್ಲು ತೆಗೆದು ಹೊರಗೆ ಬಿಟ್ಟ ಕೋಳಿ ಪಿಳ್ಳೆಗಳೂ,
ಮೂಲೆ ಸೇರಿ ಬೂದಿಬಿಸಿಗೆ ಮೈಯೊಡ್ಡಿ ಮಲಗಿದ್ದ
ಮುದಿನಾಯಿ
ಹತ್ತದು ಹರಿಯದು;


ದಿನದೂಡಿ,ಸಂಜೆ ಮಾಡಿ
ಅರವತ್ತರೆರಡಷ್ಟರನ್ನು ಕಣ್ಣು ಕಿರಿದುಮಾಡಿ
ನೇರ
ಗಂಟಲಿಗೆ ಸುರಿದುಕೊಂಡು ಕೆಲಸಕ್ಕೆ ಬಂದಾಯ್ತು


ಮಫ್ಲರ್ ಸುತ್ತಿದ್ದ ವಾಚ್‍ಮನ್ ರಂಗಯ್ಯನಿಗೆ
ಇಂದೇ ಅತಿನಿದ್ದೆ,ಕನ್ನ ಕೊರೆದು ಮನೆ ದೋಚಿದರೂ
ಕಣ್ಣು
ಬಿಡಲಾಗದಷ್ಟು,ಸದ್ದಾದರೂ ಕೇಳಿಸದಷ್ಟು!

ಲೇಬಲ್‌ಗಳು: , ,

Monday, July 14, 2008

1 ಅನಿಸಿಕೆಗಳು

  • Hi Susheel,

    As usual, xelent kaavya. gudisilina, kudukana chitraNa maththu avara saamajika kashtagaLu bahaLa chennagi varNisiddiri. badavara jeevana keLalu, nodalu kashta. Aadre ade vaastava. Alvaa? gr8 writing! keep it up. Saraswathi Vattam.

    Anonymous ಅನಾಮಧೇಯ ( 12:57 PM, July 15, 2008 )  delete:_ _

  • ಒಂದು ಕಮೆಂಟನ್ನು ಪೋಸ್ಟ್ ಮಾಡಿ

    ಒಡನಾಡಿ ಕೊಂಡಿಗಳು

    ಲಿಂಕ್ ರಚಿಸಿ