ನೀವು ನೋಡಬಯಸುವ ಪುಟವು ಈಗ ಇಲ್ಲಿ ಲಭ್ಯವಿದೆ:
ಕಾವ್ಯ-ಕೃಷಿ
ಅಡಚಣೆಗಾಗಿ ಕ್ಷಮಿಸಿ.
The content you are looking for is now available on:
ಕಾವ್ಯ-ಕೃಷಿ
Sorry for the inconvenience.
ಆ ದಿನಗಳು ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಆ ದಿನಗಳು ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಗುರುವಾರ, ಆಗಸ್ಟ್ 14, 2008
ಆ ದಿನಗಳು....
ಸಿಡಿಲೊಡೆದು ಪಳೆಯುಳಿದ
ಇಟ್ಟಿಗೆಗೂಡಲೊಂದು
ಚಾ ದುಖಾನು
ಹೋದ ತಿಂಗಳ
ಪ್ರಜಾಮತದ ಮುಖಪುಟದಿ
ಸುಮಲತಾಳ ಹುಸಿನಗು
ಪಟ್ಟಿಗಾಜಿನ ಲೋಟದ ತಳದಲಿ
ನೀರ್ಕಾಪಿ,
ದವಡೆಯಾಡಿಸಲು ಒಣಕಲು ಬನ್ ಒಂದು
ಮನಸಿನಾಳದ ಕೊರಗು,ಲೋಕಾರೂಢಿ ಚಿಂತೆ
ಎಲ್ಲವೂ ಬ್ರಿಸ್ಟಲ್ ಸಿಗರೇಟಿನ
ಹೊಗೆಯಾಗಿ ಗಾಳಿಯಲಿ ಲೀನ
ಮೂಲೆಮೂಲೆಯ ಜನ್ಮ ಜಾಲಾಡಿ
ಮುದಿರೆಲೆಯ ಗತಿಕಾಣಿಸಿದ
ಉದಯವಾಣಿ ಪತ್ರಿಕೆಯೊಂದು
ಬೆಳಗಿಂದ ಕೂತು ತಲೆಕೆರೆದು ಕುರಮಾಡಿ ಮುಗಿಸಿದ
ಕಾಪಿ-ಬನ್ನು-ಇಡ್ಲಿ-ಮಸಾಲ್ ವಡೆ-ಚಿತ್ರಾನ್ನ-ಸಿಗರೇಟಿನ
ಒಟ್ಟು ಮೊತ್ತ ಇಪ್ಪತ್ತು ರುಪಾಯಿ!!
ಏನಾದರೇನು?
ಗೋರ್ಬಚೇವನಿಗಾಗಲೀ
ಬುಶ್ಶಪ್ಪನಿಗಾಗಲಿ ಮೋಕ್ಷವಿಲ್ಲ,
ಕುಂತಿ ಮಕ್ಕಳಿಗೆ ರಾಜ್ಯವಿಲ್ಲ!